ತಮ್ಮ ಕಥೆ ಕವನಗಳನ್ನು horanadachilume@gmail.com ಗೆ ಕಳಿಸಿ.
ಓಟ
ಆಫ್ರಿಕಾ ದೇಶದಲ್ಲಿ ಆಗ ಬಿಳಿಯರು ಆಳುತ್ತಿದ್ದ ಕಾಲ.ಇಬ್ಬರು ಕರಿಯರು "ಬಿಳಿಯರಿಗೆ ಮಾತ್ರ" ಎನ್ನುವ ಸ್ಥಳದಲ್ಲಿ ಭೇಟಿಯಾದರು ಒಬ್ಬನಿಗೆ ಅಲ್ಲಿ ಕೆಲಸ ಮಾಡಲು ಅನುಮತಿ ಇತ್ತು, ಮತ್ತೊಬ್ಬನಿಗೆ ಅದಿರಲಿಲ್ಲ.ಸಿಕ್ಕಿಬಿದ್ದರೆ ಜೈಲು! ಅದೇ ವೇಳೆಗೆ ಒಬ್ಬ ಪೋಲೀಸ್ ಅವರ ಬಳಿಗೇ ಬರುವುದನ್ನು ಕಂಡು ಕೆಲಸ ಮಾಡಲು ಅನುಮತಿ ಇದ್ದ ಕರಿಯ ಮತ್ತೊಬ್ಬನಿಗೆ ನೀನು ಓಡು ನಾನು ಹಿಂದೆಯೇ ಬರುವೆ ಎಂದ.ಇಬ್ಬರೂ ಓಡತೊಡಗಿದರು.
ದೇವರು ಎಲ್ಲಿದ್ದಾನೆ?
ಗಿರಾಕಿಯೊಬ್ಬ ಹಜಾಮರ ಅಂಗಡಿಗೆ ಹೋಗಿ ತಲೆ ಕೂದಲನ್ನು ತುಂಡರಿಸಿಕೊಳ್ಳಲು ಕುಳಿತ.ಎಂದಿನಂತೆ ಹಜಾಮ ಏನಾದರೊಂದು ವಿಷಯ ತೆಗೆದು ಗಿರಾಕಿಗಳನ್ನು ಮಾತನಾಡಿಸುವುದು ರೂಢಿ. ಅಂದು"ಏss ದೇವರೆಲ್ಲಿದ್ದಾನೆ ಸ್ವಾಮಿ,? ಇಲ್ಲ,ಇದ್ದಿದ್ದ್ರೆ ಪ್ರಪಂಚದಲ್ಲಿ ಇಷ್ಟೊಂದು ಬಡವರು, ರೋಗಿಗಳು ಯಾಕೆ ಇರ್ತಿದ್ರು?"ಅಂದ.
ತಂದೆಯ ಶ್ರಮ
ತಂದೆಯೊಬ್ಬನು ತನ್ನ ಸಂಸಾರ ಸಾಗಿಸಲು ದಿನವಿಡೀ ರೊಟ್ಟಿಯನ್ನು ಮಾರುತ್ತಿದ್ದ, ಸಂಜೆಯ ವೇಳೆ ಉಳಿದ ಸಮಯದಲ್ಲಿ ವೃತ್ತಿ ಶಿಕ್ಷಣವನ್ನೂ ಮಾಡುತ್ತಿದ್ದ.ಮನೆಯ ಮಡದಿ ಮಕ್ಕಳ ಜೊತೆ ಕಾಲ ಕಳೆಯಲು ಸಾಧ್ಯವೇ ಇರುತ್ತಿರಲಿಲ್ಲ.ವರುಷಗಳು ಕಳೆದವು, ಶಿಕ್ಷಣ ಮುಗಿಯಿತು, ಒಳ್ಳೆಯ ಅಂಕಗಳನ್ನು ಪಡೆದು ಉತ್ತೀರ್ಣನೂ ಆದ. ಸರಿ ಅದಕ್ಕೆ ತಕ್ಕ ಪ್ರತಿಫಲದಂತೆ ಒಳ್ಳೆಯ ಕೆಲಸವೂ ದಕ್ಕಿತು.ಕೆಲಸದಲ್ಲಿ ಒಳ್ಳೆಯ ಹೆಸರು, ಹಣ ಸಂಪಾದಿಸತೊಡಗಿದ.ಉತ್ತಮ ಅಧಿಕಾರಿಯಾಗುವ ಸಂಭವ ಇದ್ದುದರಿಂದ ಇನ್ನೂ ಹೆಚ್ಚು ಹೆಚ್ಚು ಓದಲು ಮನಸ್ಸು ಮಾಡಿದ.ಇದರಿಂದ ಮನೆಯವರೊಡನೆ ಕಾಲ ಕಳೆಯುವುದನ್ನೇ ಮರೆತ.ಅಧಿಕಾರಿಯೂ ಆದ,ಕಂಪನಿಯ ಮಾಲೀಕನೂ ಆದ ದೊಡ್ಡ ಬಂಗಲೆ ಕಾರುಗಳು ಕೈಕಾಲಿಗೆಲ್ಲಾ ಆಳುಗಳು.
ಎರಡು ಕಪ್ಪೆಗಳು
ಮಳೆಗಾಲದ ಸಮಯ ರಾತ್ರಿ ಸಮಯ ಭೀಕರ ಸಿಡಿಲು ಗುಡುಗು ಧಾರಾಕಾರವಾಗಿ ಸುರಿಯುವ ಮಳೆ ಝರಿ ಪ್ರವಾಹದಿಂದುಕ್ಕಿ ಹರಿಯುವುದನ್ನು ಅರಿತ ಕಪ್ಪೆಗಳು ಛಂಗನೆ ನೆಗೆಯುತ್ತಾ ನೆಗೆಯುತ್ತಾ ವಲಸೆ ಹೋಗುತ್ತಿದ್ದವು, ಆಗ ಎರಡು ಕಪ್ಪೆಗಳು ಕತ್ತಲೆಯ ಕಾನನದಿ ಕಣ್ಕಾಣದೆ ಆಳವಾದ ಕಂದರದಲ್ಲಿ ಕಾಲುಜಾರಿ ಬಿದ್ದುಬಿಟ್ಟವು.ಎಷ್ಟು ಪ್ರಯತ್ನಿಸಿದರೂ ಮೇಲಕ್ಕೆ ಎಟುಕದಷ್ಟು ಆಳ, ಎರಡೂ ಕಪ್ಪೆಗಳು ಎಡಬಿಡದೆ ಜಿಗಿಯಲೆತ್ನಿಸಿದವು.
ಗಲಾ ಮತ್ತು ಹಲ್ಲಿ ಉಲಾ
(ಆಸ್ಟ್ರೇಲಿಯಾದ ನೂಂಗಾಬುರಾ ಜನರ ಜಾನಪದ ಕತೆ)
- ಸಿಡ್ನಿ ಶ್ರೀನಿವಾಸ್
ಬಿಸಿಲಲ್ಲಿ ಸದಾ ಕಾಲ ಮಲಗಿದ್ದ ಹಲ್ಲಿ ಉಲಾಗೆ (Oolah) ಬೇಸರವಾಗಿತ್ತು ಮತ್ತು ಹಾಗೇ ಸುಸ್ತಾಗಿತ್ತು. ಎದ್ದು ಏನಾದರೂ ಆಟವಾಡೋಣ ಎಂದುಕೊಂಡ. ತನ್ನ ಬೂಮೆರಾಂಗುಗಳನ್ನು (Boomerang ) ತೆಗೆದುಕೊಂಡು ಒಂದೆಡೆ ನಿಂತು ಎಸೆಯಲಾರಂಭಿಸಿದ. ಇವನು ಹೀಗೆ ತನ್ನ ಕ್ರೀಡೆಯಲ್ಲಿ ತೊಡಗಿದ್ದನ್ನು ಅಲ್ಲಿಯೇ ಇದ್ದ ಒಂದು ಗಲಾ (Galah, Cockatoo) ಮೆಚ್ಚಿ ಅಲ್ಲಿಯೇ ನಿಂತು ನೋಡುತ್ತಿದ್ದಳು. ಬೂಮೆರಾಂಗುಗಳು ಉಲಾನ ಬಳಿಗೇ ಹಿಂತಿರುಗಿ ಬರುತ್ತಿದ್ದವು. ಅವನು ಬಳಸುತ್ತಿದ್ದದ್ದು ಬುಬೆರಾ (Bubberah ) ಜಾತಿಯವು ಆಗಿದ್ದವು. ಅವು ಗಾತ್ರದಲ್ಲಿ ಚಿಕ್ಕವಾಗಿದ್ದು, ಹೆಚ್ಚು ಡೊಂಕಾಗಿದ್ದವು. ಸದಾ ಅವನಲ್ಲಿಗೇ ವಾಪಸ್ ಬರುತ್ತಿದ್ದವು. ಎಲ್ಲಾ ಬೂಮೆರಾಂಗುಗಳೂ ಹೀಗೆ ಹಿಂತಿರುಗಿ ಬರುವುದಿಲ್ಲ.
ಪಕ್ಕದಲ್ಲಿ ಗಲಾ ತನ್ನ ಪ್ರದರ್ಶನವನ್ನು ನೋಡುತ್ತಿದುದನ್ನು ಕಂಡು
ಉಲಾಗೆ ಮತ್ತಷ್ತು ಉತ್ಸಾಹ ಮತ್ತು ಜಂಭ ಬಂದವು. ಇರಲಿ ಎಂದು ಮುಂದಿನ ಬುಬೇರಾಗೆ ಮತ್ತಷ್ಟು ತಿರುವನ್ನು
ಕೊಟ್ಟು, ತನ್ನ ಬಲವನ್ನೆಲ್ಲಾ ಬಿಟ್ಟು ಎಸೆದ. ಗಾಳಿಯಲ್ಲಿ ಬುಸುಗುಟ್ಟುತ್ತಾ ಅದು ಹಿಂತಿರುಗುವಾಗ
ಗಲಾಳ ಬಳಿ ಬಂತು. ಬಂದದ್ದೇ ಅವಳ ತಲೆಯ ಮೇಲಿದ್ದ ಗರಿಗಳನ್ನು ಕತ್ತರಿಸಿ, ಅವಳ ತಲೆಯ ಮೇಲಿನ
ಚರ್ಮವನ್ನು ತರಿದು ಹಾಕಿತು. ದೊಡ್ದ ಚೀತ್ಕಾರ ಹಾಕುತ್ತಾ ಗಲಾ ಒದ್ದಾಡುತ್ತಾ ಓಡಲಾರಂಭಿಸಿದಳು.
ಹುಚ್ಚು ಹಕ್ಕಿಯಂತೆ ಪ್ರತಿ ನಿಮಿಷಕ್ಕೂ ನೆಲಕ್ಕೆ ತನ್ನ ತಲೆಯನ್ನು
ಹೊಡೆದುಕೊಳ್ಳುತ್ತಿದ್ದಳು. ಇದನ್ನು ನೋಡಿದ
ಉಲಾಗೆ ವಿಪರೀತ ಗಾಬರಿಯಾಗಿ ಅವನು ಅಲ್ಲಿಂದ ಓಡಿ ಒಂದು ಬಿಂಡಿ (Bindeah)ಯ ಪೊದೆಯೊಂದರಲ್ಲಿ ಅವಿತುಕೊಂಡ. ಅವನನ್ನು ನೋಡಿದ ಗಲಾ ಮುಂಚಿನ ಹಾಗೆಯೇ ಕಿರುಚಾಡುತ್ತಾ ಅವನನ್ನು
ಹಿಂಬಾಲಿಸಿದಳು. ಪೊದೆಯಲ್ಲಿ ಅವನು ನೋಡಿದ ಕೂಡಲೇ ಅಲ್ಲಿಗೆ ಧಾವಿಸಿ ತನ್ನ ಕೊಕ್ಕಿನಿಂದ ಅವನನ್ನು
ಹಿಡಿದು ಹೊರಗೆಳೆದಳು. ಆಗ ಅಲ್ಲಿದ್ದ ಮುಳ್ಳುಗಳೆಲ್ಲಾ ಉಲಾನ ಮೈಯ್ಯಿಗೆ ಚುಚ್ಚಿಕೊಂಡವು. ಅವನ
ಚರ್ಮದಲ್ಲಿ ಅಪಾರ ತೂತುಗಳಾದವು. ಇದು ಸಾಲದು ಎಂಬಂತೆ ನಂತರ ಅವಳು ಅವನ ಮೈಯ್ಯ ಮೇಲೆಲ್ಲಾ ತನ್ನ
ರಕ್ತ ಸಿಕಿತ ತಲೆಯನ್ನು ಸವರಿದಳು. ನಂತರ ನುಡಿದಳು,
“ ನಿನ್ನ ಮೈಯ್ಯ ಮೇಲೆಲ್ಲಾ ಬಿಂಡಿ ಮುಳ್ಳು ಚುಚ್ಚಿರಲಿ ಮತ್ತು ನನ್ನ
ರಕ್ತದ ಕಲೆ ಕೂಡ ಅಲ್ಲಿರಲಿ”
ಮುಳ್ಳು ಚುಚ್ಚಿದ ಗಾಯವನ್ನು ತಡೆಯಲಾರದೇ ಗೋಳಿಡುತ್ತಾ ಉಲಾ ಹೇಳಿದ
“ನಾನು ಕೆಂಪು ಮುಳ್ಳು ಹಲ್ಲಿಯಾಗಿರುವವರೆಗೂ ನೀನು ಬೋಡುತಲೆಯ
ಹಕ್ಕಿಯಾಗಿರುತ್ತೀಯ.”
ಇಂದಿಗೂ ಗಲಾಳ ತಲೆಯ ಮೇಲೆ ಶಿಖರದ ಕೆಳಗೆ ನೀವು ಉಲಾ ಮಾಡಿದ ಒಂದು ಬೋಡನ್ನು
ನೋಡಬಹುದು. ಗಲಾ ಇರುವ ಪ್ರದೇಶದಲ್ಲಿ ಹಲ್ಲಿಗಳು ಕೆಂಪಾಗಿರುತ್ತವೆ ಮತ್ತು ಬಿಂಡಿ ತರಹ ಮುಳ್ಳು
ದೇಹವನ್ನು ಹೊಂದಿರುತ್ತವೆ.
(ಆಧಾರ - K, Langloh Parker, Australian Legendary Tales,
David Nutt, 270-271 Strand, Melbourne,
Melville, Mullen & Slade, 1896 .)
ಕಾಗಕ್ಕನ ಶಕ್ತಿ
- ಕನಕಾಪುರ ನಾರಾಯಣ
ಅದೊಂದು ಸಮುದ್ರತೀರ. ಮೀನುಗಾರರ ಜೊತೆಗೆ ಕೊಕ್ಕರೆ, ಕಾಗೆ,ಕಡಲ ಹಕ್ಕಿ ಹಾಗೂ ಇನ್ನೂ ಅನೇಕ ಪಕ್ಷಿಗಳು ಮೀನು ಹಂಚಿಕೊಂಡು ತಿನ್ನುತ್ತಾ ವಾಸವಾಗಿದ್ದವು. ಹೀಗೇ ಬಲೆ ಬೀಸಲು ದೂರ ಸಾಗಿದ ಮೀನುಗಾರರನ್ನೇ ಕಾಯುತ್ತಾ ಕುಳಿತಿರಲು ಕುಚೇಷ್ಟೆ ಮಾಡಲೆಂದು ಕಾಗೆಯೊಂದು ಮುದಿ ಕೊಕ್ಕರೆಯೊಂದಕ್ಕೆ ಹೇಳಿತು"ಅಯ್ಯಾ ನಿನ್ನ ರೆಕ್ಕೆಗಳೇಕೆ ಅಷ್ಟು ಬಡಕಲಾಗಿವೆ ನೋಡು ನನ್ನ ರೆಕ್ಕೆ ಪುಕ್ಕಗಳು ಎಂಥಾ ಬಲಶಾಲಿಯಾಗಿವೆ, ಅದಕ್ಕೇ ಇರಬೇಕು ನೀನು ಯಾವಾಗಲೂ ತಲೆ ತಗ್ಗಿಸಿ ನೀರಿನಲ್ಲಿ ಮೀನನ್ನು ಕಾಯುತ್ತಾ ನಿಂತಿರುವೆ,ಅದೇ ನನ್ನನು ನೋಡು"ಎಂದು ಪುರ್ ಎಂದು ಹಾರಿ ನಾಲ್ಕುಬಾರಿ ಗಾಳಿಯಲ್ಲೇ ಲಾಗ ಹಾಕಿ ವೇಗವಾಗಿ ಬಂದು ಕೊಕ್ಕರೆಯ ಪಕ್ಕಕ್ಕೆ ಕುಳಿತು "ನಿನ್ನಿಂದ ಇದು ಈ ಜನುಮದಲ್ಲಿ ಸಾಧ್ಯವಿಲ್ಲ ಬಿಡು,ಹೀಗೆ ಹಾರಿದರೆ ಮಾತ್ರ ಮೀನುಗಾರರ ಬಲೆಯಿಂದ ನಾವು ಒಂದೆರೆಡು ಮೀನುಗಳನ್ನು ಕಸಿದುಕೊಳ್ಳಲು ಸಾಧ್ಯ."ಎಂದು ಜಂಭದಿಂದ ನುಡಿಯಿತು.ಅದಕ್ಕೆ ಕೊಕ್ಕರೆ "ಅರೆರೆ ಕಾಗಕ್ಕಾ ನನಗೂ ಹಾರಲು ಬರದೇ ಏನಿಲ್ಲ,ನಾನೂ ಚೆನ್ನಾಗೇ ಹಾರಬಲ್ಲೆ"ಎಂದಿತು. ಈ ಮಾತನ್ನು ಕೇಳಿ ಕಾಗೆ ಪಕ್ಕನೆ ನಕ್ಕಿತು"ಸರಿ ಹಾಗಾದರೆ ದೂರಕ್ಕೆ ಹಾರುವ ಸ್ಪರ್ಧೆ, ನಿನ್ನಲ್ಲಿ ಗುಂಡಿಗೆ ಇದ್ದಲ್ಲಿ ಬಾ"ಎಂದು ಸವಾಲೆಸೆಯಿತು. ಸರಿ ಕೊಕ್ಕರೆ ಅದಕ್ಕೆ ಒಪ್ಪಿ ಮುದುಡಿದ್ದ ತನ್ನ ರೆಕ್ಕೆ ಬಿಚ್ಚಿ, ಒಮ್ಮೆ ಪಟಪಟನ ಒದರಿ ನಿಧಾನವಾಗಿ ಹಾರಲು ಆರಾಂಭ ಮಾಡಿತು,ಕಾಗೆ ಭರ್ರನೆ ಅದರ ಪಕ್ಕಕ್ಕೇ ಹಾರಿ ಬಂದು"ಇಷ್ಟೇನಾ ನಿನ್ನ ವೇಗ? ಅಯ್ಯಾ ನಾನೇನೋ ನಿನ್ನ ರೆಕ್ಕೆ ಅಗಲ ನೋಡಿ ಭಾರೀ !.........."ಎನ್ನುತ್ತಾ ಎಡಬಿಡದೆ ಆಡಿಕೊಳ್ಳುತ್ತಾ ಜೊತೆಯಲ್ಲೇ ಹಾರುತ್ತಾ ಬಂದಿತು.ಸ್ವಲ್ಪ ಸಮಯದ ನಂತರ ಕಾಗೆ ಒಂದೇ ಸಮನೆ ಮಾತನಾಡಿ ಸುಸ್ತಾಗಿ ಬಾಯಾರಿದಂತಾಗಿ ಒಮ್ಮೆ ಬಂದ ದಾರಿಯ ಕಡೆಗೆ ತಿರುಗಿ ನೋಡಿತು. ದಡ ಕಾಣದಷ್ಟು ದೂರ ತಲುಪಿದ್ದರು. ಕಾಗೆಗೆ ರೆಕ್ಕೆಗಳಲ್ಲಿ ಶಕ್ತಿ ಕಡಿಮೆಯಾಗತೊಡಗಿತು,ಆದರೂ ಸ್ಪರ್ಧೆಯಲ್ಲವೇ, ಧೈರ್ಯದಿಂದ ಕೊಕ್ಕರೆಯನ್ನು ಕೇಳಿತು"ಇನ್ನೂ ಎಷ್ಟು ಹೊತ್ತು ಹೀಗೇ ಹಾರುವುದು?" ಅದಕ್ಕೆ ಕೊಕ್ಕರೆ ಶಾಂತವಾಗಿ ಉತ್ತರಿಸಿತು "ಎನ್ನೇನು 2-3 ದಿನ ಅಷ್ಟೇ"....."ಹಾ! 2-3 ದಿನ! ನನ್ನ ಕೈಲಾಗದು,ಈಗಲೇ ನನ್ನಲ್ಲಿ ತಿರುಗಿ ತೀರಕ್ಕೆ ಹೋಗುವಷ್ಟೂ ಶಕ್ತಿಯಿಲ್ಲ ಇನ್ನು 2-3 ದಿನ! ಅಯ್ಯಾ ನನ್ನನು ಕಾಪಾಡು ನನಗೆ ನಿನ್ನಂತೆ ನೀರಿನ ಮೇಲೆ ತೇಲಲೂ ಬಾರದು"ಎಂದು ಗೋಗರೆಯಿತು. ಅದಕ್ಕೆ ಕೊಕ್ಕರೆ "ಬಾ ನನ್ನ ಅಗಲವಾದ ಬೆನ್ನಿನ ಮೇಲೆ ಕೂಡು ನಾವು ಹೊರಟ ತೀರಕ್ಕೆ ಕರೆದೊಯ್ಯುವೆ "ಎಂದು ಹೇಳಿ ಕಾಗೆಯನ್ನು ಕೂಡಿಸಿಕೊಂಡು ವಾಪಸ್ ತಂದು ತೀರಕ್ಕೆ ಬಿಟ್ಟಿತು.ಕಾಗೆ ತನ್ನ ತನ್ನ ತಪ್ಪರಿತು,ಕ್ಷಮೆ ಕೋರಿ,ತಲೆ ತಾಗಿಸಿತು.
ಮಾತನಾಡುವ ಮರ
- ಕನಕಾಪುರ ನಾರಾಯಣ
ಪುಟ್ಟ ಬಾಲಕನೊಬ್ಬ ದಿನಾ ಒಂದು ಮರದ ಬಳಿ ಆಡುತ್ತಿದ್ದ, ಅದರ ಮೇಲೆ ಹತ್ತುತ್ತಿದ್ದ, ಅದರ ಟೊಂಗೆ ಹಿಡಿದು ಜೋತಾಡುತ್ತಿದ್ದ. ಆ ಮರಕ್ಕೂ ಬಾಲಕನಿಗೂ ನಂಟೇ ಬೆಳೆಯಿತು.ಒಂದು ದಿನ ಬಾಲಕ ಪ್ರತಿನಿತ್ಯದಂತೆ ಆಡದೆ ಸುಮ್ಮನೆ ಮರದಡಿ ಕುಳಿತ.ಅದನ್ನು ಕಂಡ ಮರ ಮಾತನಾಡಿತು "ಮಗು ಏನಾಯಿತು?"ಎಂದಿತು, ಆಗ ಬಾಲಕ "ನನಗೆ ಹಸಿವಾಗಿದೆ ತಿನ್ನಲು ಮನೆಯಲ್ಲಿ ಏನೂ ಇಲ್ಲ"ಎಂದ.ತಕ್ಷಣ ಆ ಮರ ತನ್ನ ಎಲೆಗಳ ಮರೆಯಲ್ಲಿದ್ದ ಹಣ್ಣನ್ನು ಬೀಳಿಸಿತು.ಅದನ್ನು ತಿಂದು ಸಂತೋಷದಿಂದ ದಿನಾ ಅಲ್ಲೇ ಆಡಲು ಬರುತ್ತಿದ್ದ.ಸ್ವಲ್ಪ ವರ್ಷಗಳ ಕಾಲ ಬಾಲಕ ಮರಳಿ ಮರದ ಬಳಿ ಬರಲಿಲ್ಲ,ಮರಕ್ಕೆ ಬೇಸರವಾಗಿತ್ತು.ಒಂದು ದಿನ ಎದುರಿಗೆ ಕಾಣಿಸಿಕೊಂಡು ಬೇಸರದ ಮುಖ ಮಾಡಿಕೊಂಡಿರಲು ಮರವು ಕಾರಣ ಕೇಳಿತು."ಮಗೂ ನನ್ನಬಳಿ ಆಡಲು ಬಾ"ಎಂದಿತು.
ಅದಕ್ಕೆ ಆ ಹುಡುಗ ನಾನೀಗ ದೊಡ್ಡವನಾಗಿದ್ದೇನೆ,ಆದರೆ ವ್ಯಾಪಾರ ಮಾಡುವ ಬಯಕೆ ಆದರೆ ನನ್ನಲ್ಲಿ ಹಣವಿಲ್ಲ"ಎಂದ.ತಕ್ಷಣ ಆಮರ ತನ್ನಲ್ಲಿದ್ದ ಎಲ್ಲಾ ಹಣ್ಣುಗಳನ್ನು ಆತನಿಗೆ ಕೊಟ್ಟಿತು.ಅದಲ್ಲು ಮಾರಿ ವ್ಯಾಪಾರದಲ್ಲಿ ಚೆನ್ನಾಗೇ ಹಣ ಮಾಡಿದ.ಸ್ವಲ್ಪಕಾಲ ಮರವನ್ನು ಭೇಟಿ ಮಾಡಲು ಬರಲೇ ಇಲ್ಲ.ಮರಕ್ಕೆ ಮತ್ತೆ ಬೇಸರವಾಗಿತ್ತು.ಕೆಲವು ದಿನಗಳ ಬಳಿಕ ಮತ್ತೆ ಬಾಲಕ ಹಿಂತಿರುಗಿದ.ಮರ ಮತ್ತದೇ ಆಸೆಯಿಂದ "ನನ್ನೊಡನೆ ಆಡಲು ಬಾ"ಎಂದಿತು.ಹುಡುಗನಿಂದ ಅದೇ ಉತ್ತರ"ನನಗೀಗ ಆಡಲು ಸಮಯವಿಲ್ಲ,ನಾನು ಬಹಳ ಕಷ್ಟದಲ್ಲಿದ್ದೇನೆ ನನಗೆ ಆಶ್ರಯಕ್ಕೊಂದು ಮನೆ ಕಟ್ಟಿಕೊಳ್ಳಬೇಕಾಗಿದೆ,ಆದರೆ ಕಟ್ಟಿಗೆ,ಮರ ಕೊಳ್ಳುವಷ್ಟು ಹಣವಿಲ್ಲ"ಎಂದ.ಹಿಂದೂ ಮುಂದು ನೋಡದೆ ಮರ"ಮಗೂ ನನ್ನ ಈ ದೊಡ್ಡ ಮರದ ಟೊಂಗೆಗಳನ್ನು ಕತ್ತರಿಸಿ ಉಪಯೋಗಿಸಿಕೋ"ಎಂದಿತು.ಅಂತೆಯೇ ಅವನು ಅದನ್ನು ಉಪಯೋಗಿಸಿ ಮನೆಯನ್ನೂ ಕಟ್ಟಿದ.ವರ್ಷ ಕಳೆದರೂ ಮರಳಿಬಾರದ ಹುಡುಗನನ್ನು ಕಾಯುತ್ತಾ ಮರ ಬೇಸರದಲ್ಲಿತ್ತು.ಒಂದು ದಿನ ಆತ ಮತ್ತೆ ಬಂದ.ಎಂದಿನಂತೆ "ನನ್ನ ಬಳಿ ಆಡಲು ಬಾ"ಎಂದು ಮರ ಕರೆಯಿತು.ಹುಡುಗನೂ ಎಂದಿನಂತೆ "ನನಗೀಗ ಆಡಲು ಸಮಯವಿಲ್ಲ,ನನಗೀಗ ಮದುವೆಯಾಗಿದೆ,ನಾನು ಕೆಲಸಕ್ಕೆ ದೂರದೂರಿಗೆ ನದಿ ದಾಟಿ ಹೋಗಬೇಕಾಗಿದೆ ಈಜು ಬಾರದು,ದೋಣಿ ಮಾಡಿಕೊಳ್ಳಲು ಮರದ ಹಲಗೆ ಬೇಕು"ಎಂದ.ಕೂಡಲೇ ಆ ಮರ"ಮಗೂ ನನ್ನ ಕಾಂಡದಲ್ಲಿ ಹೆಚ್ಚು ಹಲಗೆಗಳನ್ನು ಮಾಡಿಕೊಳ್ಳಬಹುದು,ಉಪಯೋಗಿಸಿಕೋ" ಎಂದಿತು.ಅಂತೆಯೇ ಉಳಿದ ಮರವನ್ನು ಕಡಿದು ದೋಣಿ ಮಾಡಿಕೊಂಡು ಸಂಗಾತಿಯೊಡನೆ ಹೊರಟುಹೋದ.ದಶಕಗಳು ಕಳೆದರೂ ಮರ ಆತನಿಗೆ ಕಾಯುತ್ತಲೇ ಇತ್ತು. ಒಮ್ಮೆ ಮರಳಿ ಬಂದ ಆತ ಮುದುಕನಾಗಿದ್ದ.ಮರವು ಅದೇ ಭಾವನೆಯಿಂದ"ಮಗೂ ಹೇಗಿದ್ದೀಯಾ" ಎಂದಿತು.ಆಗ ಅವನು "ನನಗೆ ಬಹಳ ದಣಿವಾಗಿದೆ"ಸ್ವಲ್ಪ ವಿಶ್ರಾಂತಿ ಬೇಕು"ಎಂದ. ಆತನಿಗೆ ಕೊಡಲು ಮರದ ಬಳಿ ಏನೂ ಉಳಿದಿರಲಿಲ್ಲ"ಮಗೂ ನನ್ನಲ್ಲಿ ಉಳಿದಿರುವುದು ಈ ಬುಡ ಮತ್ತು ಬೇರು, ಮಾತ್ರ ,ಬಾ ಈ ಬುಡದಿಮ್ಮಿಯ ಮೇಲೆ ಕುಳಿತು ವಿಶ್ರಮಿಸು"ಎಂದಿತು.ಅವನು ಅದರ ಮೇಲೆ ಕುಳಿತ.ಮರಕ್ಕೆ ಇದರಿಂದ ಆನಂದವಾಯಿತು.ಮನಸ್ಸಿನಲ್ಲೇ ಖುಷಿ ಅನುಭವಿಸಿತು.
ನೀತಿ:ಇಲ್ಲಿ ಬರುವ ಮರವೇ ನಮ್ಮ ತಂದೆ-ತಾಯಿಯರ ಹಾಗೆ,ಅವರು ಬಯಸುವುದೇ ನಮ್ಮ ಸಹಬಾಳ್ವೆ.
ಆಳು
- ಕನಕಾಪುರ ನಾರಾಯಣ
ಹಿಂದೊಮ್ಮೆ ಆಫ್ರಿಕಾ ದೇಶದಲ್ಲಿ ಕಮೇರಾ ಎಂಬ ರಾಜ ದರ್ಪದಿಂದ ಆಳುತ್ತಿದ್ದ.ಆತನನ್ನು ಕಂಡರೆ ಪ್ರಜೆಗಳು ಹೆದರಿ ನಡುಗುತ್ತಿದ್ದರು.ಸಭೆಯಲ್ಲಿ ಎಲ್ಲರನ್ನೂ ಕರೆಸಿ "ಈ ನಾಡಿಗೆ ನಾನೇ ರಾಜ,ಎಲ್ಲರೂ ನನ್ನ ಆಳುಗಳು" ಎಂದು ಗರ್ವದಿಂದ ಘೋಶಿಸಿದ.
ಅದೇ ವೇಳೆಗೆ ಒಬ್ಬ ಮುದುಕ ಅಲ್ಲಿಗೆ ಬಂದು"ಸಾಧ್ಯವಿಲ್ಲ, ಎಲ್ಲರೂ ಈ ಭೂಮಿಯಲ್ಲಿ ಆಳುಗಳೇ"ಎಂದ.ಅದನ್ನು ಕೇಳಿ ಕುಪಿತನಾದ ರಾಜ ಆತನನ್ನು ಹತ್ತಿರಕ್ಕೆ ಕರೆದು "ಎಷ್ಟು ಧೈರ್ಯ ನಿನಗೆ ಈ ಮಾತನ್ನು ಹೇಳಲು,ಯಾರುನೀನು?"ಎಂದು ಕೇಳಿದ.ಅದಕ್ಕೆ ಮುದುಕ "ಅಯ್ಯಾ ದೊರೆ,ಕುಡಿಯಲು ನೀರಿಲ್ಲದೆ ಬಳಲುತ್ತಿರುವ ಪಕ್ಕದ ಊರಿಂದ ಬಂದವನು ನಾನು,ಒಂದು ಬಾವಿಯನ್ನು ತೋಡಿಸಿಕೊಡಿ ಎಂದು ಬೇಡಲು ಬಂದಿರುವೆ"ಎಂದ."ಓಹೋ ಹಾಗಾದರೆ ನೀನೊಬ್ಬ ಭಿಕ್ಷುಕ!ನನ್ನನ್ನೂ ಆಳು ಎಂದ ನಿನಗದೆಷ್ಟು ಸೊಕ್ಕು"ಎಂದು ಗದರಿದ.ಅದಕ್ಕೆ ಮುದುಕ ಶಾಂತಿಯಿಂದ ಉತ್ತರಿಸಿದ "ದೊರೆ ಬೇಕಿದ್ದರೆ ಸಾಯಂಕಾಲದ ಓಳಗೆ ಸಾಬೀತು ಮಾಡಿ ತೋರಿಸುತ್ತೇನೆ" ಎಂದ."ಸರಿ ನಿನ್ನ ಮಾತು ನಿಜವಾದರೆ ಬಾವಿಯನ್ನು ತೋಡಿಸಿ ಕೊಡುತ್ತೇನೆ"ಎಂದ.ತಕ್ಷಣ ಮುದುಕ ನಮ್ರತೆಯಿಂದ ತಲೆ ತಗ್ಗಿಸಿ ಕೈಯಲ್ಲಿದ್ದ ಊರುಗೋಲನ್ನು ರಾಜನಿಗೆ ಹಿಡಿಯಲು ಹೇಳಿ ಆತನ ಪಾದ ಸ್ಪರ್ಷ್ಸಿಸಿ ನಮಸ್ಕರಿಸಿದ,ನಂತರ ತನ್ನ ಕೋಲನ್ನು ವಾಪಸ್ ಕೇಳಿ ಪಡೆದ."ಇನ್ನು ಇದಕ್ಕಿಂತಾ ಮತ್ತೇನು ಪುರಾವೆ ಬೇಕು ಪ್ರಭು?" ಎಂದ ಮುದುಕ."ಪುರಾವೆ?" ರಾಜ ಕಣ್ಣರಳಿಸಿ ಕೇಳಿದ.ನಾನು ಕೋಲನ್ನು ಹಿಡಿಯಲು ಹೇಳಿದಾಗ ನೀವು ಹಿಡಿದಿರಲಿಲ್ಲವೇ? ಮತ್ತೆ ಕೊಡಿ ಎಂದಾಗ ಕೊಡಲಿಲ್ಲವೇ? ನಾನು ಹೇಳಿದ್ದನು ನೀವು ಮಾಡಿದಿರಿ"ಎಂದ.ರಾಜನ ಮುಖ ಮುದುಡಿತು.ಮುದುಕನ ಊರಿನಲ್ಲಿ ಒಂದಲ್ಲ ಎರಡು ಬಾವಿ ತೋಡಿಸಿಕೊಟ್ಟ.ರಾಜನ ಅಟ್ಟಹಾಸವೂ ಅಡಗಿತು.
ಕರುಳ ಮಿಡಿತ
- ಕನಕಾಪುರ ನಾರಾಯಣ
ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ರೈತನೊಬ್ಬ ತನ್ನ ಮನೆಯ ಮುಂದಿನ ಅಂಗಳದಲ್ಲಿ ಸೌದೆಯನ್ನು ಸೀಳುವ ಕೆಲಸದಲ್ಲಿ ತೊಡಗಿದ್ದ.ಕೊಡಲಿಯ ಏಟು ಮರದ ದಿಮ್ಮಿಗೆ ಪ್ರತಿಬಾರಿ ಬೀಳುವಾಗಲೂ ಅವನ ಮೈಯಲ್ಲಿ ಬೆವರು ತೊಟ್ಟಿಕ್ಕುತ್ತಿತ್ತು,ದಣಿದು ಬಾಯಾರಿದ್ದರೂ ಲೆಕ್ಕಿಸದೆ ಒಂದೇ ಸಮನೆ ದುಡಿಯುತ್ತಿದ್ದ ಮಗನನ್ನು ಕಂಡು ಅವನ ತಾಯಿ" ಮಗ ಶಾಖ ಜಾಸ್ತಿ ಅಗ್ತಿದೆ ಮನೆ ಒಳಕ್ಕೆ ಬಾ,ಆಮೇಲೆ ಸೌದೆ ಹೊಡೆದರೆ ಆಯ್ತು" ಅಂದಳು.ಆದರೆ ಅದನ್ನು ಲೆಕ್ಕಿಸದೆ ಸುಡು ಸುಡು ಬಿಸಲಿನಲ್ಲಿ ತನ್ನ ಕೆಲಸ ಮುಂದುವರೆಸಿದ ಮಗ ಪದೇ ಪದೇ ತಾಯಿಯ ಕೂಗನ್ನು ಕೇಳಿ ತಾಳ್ಮೆ ಕಳೆದು ಒಮ್ಮೆ ರೇಗಿದ"ಏ ನೀನು ಒಳಕ್ಕೆ ಹೋಗಮ್ಮಾ,ಹೋಗಿ ಬೇರೆ ಕೆಲಸ ನೋಡು"ಎಂದು ಬೈದ.
ಒಳಕ್ಕೆಹೋದ ತಾಯಿ ವರುಶವೂ ತುಂಬದ ತನ್ನ ಮೊಮ್ಮಗನನ್ನು ಎತ್ತು ತಂದು ಸುಡುಬಿಸಿಲಿನಲ್ಲಿ ಮಲಗಿಸಿದಳು.ಇದನ್ನು ಕಂಡು ಮಗನಿಗೆ ಬಹಳ ಕೋಪ ಬಂದಿತು"ನಿಂಗೇನ್ ಬುದ್ಧಿಗಿದ್ಧಿ ಇದ್ದೀಯಾ? ಅಲ್ಲಾ ಮಗೂನ ಬಿಸಿಲಿನಲ್ಲಿ ಮಲಗಿಸಿದ್ದೀಯಲ್ಲಾ ಮೈ ಸುಡಲ್ವಾ?" ಎಂದು ಗದರಿದ.ಅದಕ್ಕೆ ತಾಯಿ "ಸುಟ್ಟರೆ ನಿಂಗೇನಾಗುತ್ತೆ?" ಎಂದು ಪ್ರಶ್ನಿಸಿದಳು.ಅದಕ್ಕೆ ಆ ರೈತ "ಅದು ನನ್ನ ಮಗು, ಕರಳು ಚುಳ್ ಅನ್ನಲ್ವಾ" ಎಂದ.ತಕ್ಷಣ ತಾಯಿ "ನೀನು ಬಿಸಿಲಿನಲ್ಲಿ ಸುಡ್ತಾ ಇದ್ದರೆ ನನ್ನ ಕರಳು ಏನು ಆಗಬೇಕು?" ಎಂದಳು.ಕೂಡಲೇ ತಾಯಿಯ ಮಮತೆ ಅರಿತು ಮನೆಯೊಳಕ್ಕೆ ಹೊರಟ ಮಗ.
ಅನುಕೂಲ
- ಕನಕಾಪುರ ನಾರಾಯಣ
ಬೆಸ್ತನೊಬ್ಬ ಪ್ರತಿದಿನವೂ ತಾನು ಹಿಡಿದ ಮೀನುಗಳನ್ನು ಒಂದು ಗಾಡಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದ.ದಾರಿಯಲ್ಲಿ ಒಂದು ನರಿಗೆ ಅಷ್ಟೊಂದು ಮೀನುಗಳನ್ನು ನೋಡಿ ಬಾಯಿಯಲ್ಲಿ ನೀರೂರಿ ಬಂದಿತು.ಹೇಗಾದರೂ ಮಾಡಿ ಮೀನುಗಳನ್ನು ತಿನ್ನಬೇಕೆಂದು ಉಪಾಯದಿಂದ ಬೆಸ್ತ ಬರುವ ದಾರಿಯಲ್ಲಿ ಸತ್ತಂತೆ ಮಲಗಿತು,ಬೆಸ್ತನು ಇರಲಿ ಈ ಸತ್ತ ನರಿಯ ಚರ್ಮವನ್ನು ಮಾರಿ ಹಣವನ್ನು ಪಡೆಯಬಹುದು ಎಂದು ಆಲೋಚಿಸಿ ನರಿಯನ್ನು ಎತ್ತಿ ಗಾಡಿಯಲ್ಲಿ ಮೀನುಗಳಿದ್ದ ಕಡೆ ಹಾಕಿದನು. ದಾರಿಯುದ್ದಕ್ಕೂ ನರಿ ಹೊಟ್ಟೆತುಂಬುವಷ್ಟು ಮೀನುಗಳನ್ನು ಕಬಳಿಸಿತು.ಬೆಸ್ತನಿಗೆ ತಿಳಿಯದ ಹಾಗೆ ಕೆಳಕ್ಕೆ ಜಿಗಿದು ಕಾಡಿಗೆ ಓಡಿತು,ಇದನ್ನು ಕಂಡ ತೋಳವೊಂದು "ಆ ಗಾಡಿಯಲ್ಲಿ ನೀನೇನು ಮಾಡುತ್ತಿದ್ದೆ?"ಎಂದು ವಿಚಾರಿಸಲು,ನರಿ ನಡೆದದ್ದೆಲ್ಲಾ ವಿವರಿಸಿತು.
ತೋಳವೂ ಥಟ್ಟನೆ ಓಡಿ ತಾನೂ ಆ ಬೆಸ್ತನ ಗಾಡಿಯ ಮುಂದೆ ಸತ್ತಂತೆ ಮಲಗಿತು.ಬೆಸ್ತನಿಗೆ ಮತ್ತಷ್ಟು ಸಂತೋಷವಾಗಿ ಆ ತೋಳದ ಚರ್ಮವನ್ನು ಮಾರಿ ಹಣ ಮಾಡಬಹುದೆಂದು ಅದನ್ನು ಎತ್ತಲು ಹೋದನು ತೋಳವು ಭಾರವಾಗಿದ್ದ ಕಾರಣ ಒಂದು ಗೋಣಿ ಚೀಲದಲ್ಲಿ ಅದನ್ನು ತಳ್ಳಿ ಬಿಗಿಯಾಗಿ ಕಟ್ಟಿ ಗಾಡಿಯೊಳಕ್ಕೆ ಧೊಪ್ಪೆಂದು ಎಸೆದು ಮುಂದೆ ಸಾಗಿದನು.ತೋಳಕ್ಕೆ ಒಂದು ಮೀನನ್ನೂ ತಿನ್ನಲಾಗಲಿಲ್ಲ.ಮನೆಗೆ ಬಂದಾಗ ಬೆಸ್ತನು ಚೀಲವನ್ನು ಬಿಚ್ಚಿದಕೂಡಲೇ ಪ್ರಾಣ ಭೀತಿಯಿಂದ ಕಾಡಿನ ಕಡೆ ಓಡಿತು
ನೀತಿ: ಒಬ್ಬರಿಗಾದ ಅನುಕೂಲ ಮತ್ತೊಬ್ಬರಿಗೂ ಆಗದೇ ಇರಬಹುದು
ಸರ್ಪ - ಸನ್ಯಾಸಿ
- ಕನಕಾಪುರ ನಾರಾಯಣ
ಊರಿನ ಹೊರಗೆ ಒಂದು ಎತ್ತರದ ಹುತ್ತ, ಅದರಲ್ಲಿ ದೊಡ್ಡದಾದ ಹಾವೊಂದಿತ್ತು, ಆಗಾಗ್ಗೆ ಅದರ ಕಡಿತಕ್ಕೆ ನಾಯಿ, ಕೋಳಿ, ಕುರಿ, ಕರುಗಳು ಬಲಿಯಾಗುತ್ತಿದ್ದವು.ಇದರ ಭೀತಿಯಿಂದ ಊರಿನವರು ಹೊರಗೆ ಓಡಾಡುವುದನ್ನು ಆದಷ್ಟು ನಿಲ್ಲಿಸಿದ್ದರು.
ಆಗ ಅಲ್ಲಿಗೆ ಒಬ್ಬ ಸನ್ಯಾಸಿ ಭಿಕ್ಷೆಗೆ ಬಂದನು, ಬಿಕೋ ಎನ್ನುವ ಊರಿನಲ್ಲಿ ಹಾವಿನ ವಿಷಯ ತಿಳಿದು, ಹುತ್ತದ ಬಳಿ ನಡೆದನು. ಹಾವು ಹೊರಗೆ ಬಂದು ತಲೆಬಾಗಿ ವಂದಿಸಿತು. ಹಾವಿನೊಡನೆ ಸನ್ಯಾಸಿ ಮಾತುಕತೆ ನಡೆಸಿದನು. ಹಾವು ತನ್ನ ಪರ ಕಾರಣ ಹೇಳಿಕೊಂಡಿತು. ಹಿಂದೊಮ್ಮೆತನ್ನ ಗೆಳೆಯನನ್ನು (ಮತ್ತೊಂದು ಹಾವು) ಜನರು ಕೋಲಿನಿಂದ ಚಚ್ಚಿ ಕೊಂದ ಕಥೆ ವಿವರಿಸಿತು. ಸನ್ಯಾಸಿ ಸಂತಾಪ ಸೂಚಿಸಿ, ಮುಂದೆ ಯಾರನ್ನೂ ಕಚ್ಚುವುದಿಲ್ಲಾ ಎಂದು ಆಣೆ ಮಾಡಲು ಹೇಳಿದ. ಹಾವನ್ನೂ ಯಾರೂ ಕೊಲ್ಲುವಂತಿಲ್ಲ ಎಂದು ಭರವಸೆ ಇತ್ತು ಮುಂದೆ ನಡೆದ.
ಅದರಂತೆ ಆ ಹಾವು ಮುಂದೆ ಯಾರನ್ನೂ ಕಡಿಯಲಿಲ್ಲ. ಸುಮ್ಮನೆ ಹರಿದಾಡುವುದನ್ನು ಕಂಡ ಮಕ್ಕಳು ನೋಡೋಣವೆಂದು ಪುಟ್ಟ ಕಡ್ಡಿಯನ್ನು ಅದರ ಮೇಲೆ ಎಸೆದರು, ಕಲ್ಲನೇ ಎಸೆದರು, ಬಾಲ ಹಿಡಿದರು, ಎಳೆದರು, ಹಗ್ಗದಂತೆ ಎಳೆದಾಡಿದರು ಕೊಟ್ಟ ಮಾತಿಗೆ ತಪ್ಪದಂತೆ ಹಾವು ಸುಮ್ಮನಿತ್ತು, ಯಾರನ್ನೂ ಕಡಿಯಲಿಲ್ಲ.
ಸುಮಾರು ದಿವಸಗಳ ಬಳಿಕ ಸನ್ಯಾಸಿ ಅದೇ ಊರಿಗೆ ಮತ್ತೆ ಬಂದ. ಮೈಯಲ್ಲಾ ಗಾಯಗೊಂಡ ಹಾವು ನಿಧಾನವಾಗಿ ಹರಿದು ರಸ್ತೆ ದಾಟುತ್ತಿತ್ತು. ಸನ್ಯಾಸಿ ಅದರ ಬಳಿಗೆ ಹೋಗಿ ಅರೆ ಇದೇನಿದು ನೀನು ಹೀಗಾಗಿರುವೆ? ಎಂದ."ಎಲ್ಲಾ ನಿಮ್ಮಿಂದ ಸ್ವಾಮಿ..ನೀವು ಯಾರನ್ನೂ ಕಡಿಯಕೂಡದೆಂದು ಆಣೆ ಇಡಿಸಿದಿರಿ...ಎಲ್ಲಾ ಅದರ ಪರಿಣಾಮ" .ಅದಕ್ಕೆ ಸನ್ಯಾಸಿ "ಅಯ್ಯೋ ಸಾಧುವೇ ನಾನು ಯಾರನ್ನೂ ಕಡಿಯಬೇಡಾ ಎಂದೆ ಅಷ್ಟೇ ಹೊರತು, ಬುಸ್ ಎನ್ನಬೇಡಾ ಅನ್ನಲಿಲ್ಲವಲ್ಲಾ" ಎಂದ. ಅಂದಿನಿಂದ ಹಾವು ಬದುಕುವ ರೀತಿ ಕಲಿಯಿತು.
ಚೋರ ಬಾಲಕ
- ಕನಕಾಪುರ ನಾರಾಯಣ
ಆಶ್ರಮವೊಂದರಲ್ಲಿ ಹತ್ತಾರು ವಿಧ್ಯಾರ್ಥಿಗಳು ಕಲಿಯುತ್ತಿದ್ದರು.ಅವರಲ್ಲಿ ಒಬ್ಬ ಹುಡುಗ ಬೇರೊಬ್ಬರ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ. ಗುರುಗಳಿಗೆ ದೂರು ಕೊಟ್ಟರೂ ಅವರು ಸುಮ್ಮನೆ ಇದ್ದರು.ಒಂದು ದಿನ ಅವನ ಕಳ್ಳತನ ಮಿತಿಮೀರಿ ದೂರು ಕೊಟ್ಟರೂ ತಮ್ಮ ಗುರುಗಳೂ ಆತನಿಗೆ ಏನೂ ಕ್ರಮ ತೆಗೆದುಕೊಳ್ಳದಿರುವುದನ್ನು ಕಂಡು ಬೇರೆ ವಿದ್ಯಾರ್ಥಿಗಳೆಲ್ಲಾ ಆಶ್ರಮವನ್ನೇ ತ್ಯಜಿಸಿ ಹೋಗಲು ನಿರ್ಧರಿಸಿದರು. ಆಗ ಗುರುಗಳಿಗೆ ವಿಷಯ ತಿಳಿದು ಎಲ್ಲರನ್ನೂ ಕರೆದು "ಮಕ್ಕಳೇ ನೀವೆಲ್ಲಾ ಒಳ್ಳೆಯ ಮಕ್ಕಳು ಇಲ್ಲಿಂದ ಹೊರಟರೂ ನಿಮಗೆ ಬೇರೆ ಆಶ್ರಮ ಸೇರುವುದು ಕಷ್ಟವಿಲ್ಲ, ಆದರೆ ನಿಮ್ಮ ಸಹೋದರನಿಗೆ ಎಲ್ಲಿ ಆಶ್ರಯ ಸಿಗುತ್ತದೆ ಹೇಳಿ, ಅವನಿಗಿನ್ನೂ ತಪ್ಪು-ಸರಿಗಳ ಅರಿವೇ ಇಲ್ಲ, ನೀವೆಲ್ಲಾ ಹೋದರೂ ಆತನನ್ನು ಕೈಬಿಡುವಹಾಗಿಲ್ಲ ನಾನು" ಎಂದರು. ತುಂಟ ಹುಡುಗನ ಕಣ್ಣಿನಿಂದ ಕೆನ್ನೆಯ ಮೇಲೆ ನೀರು ಹರಿಯಿತು. ತನ್ನ ತಪ್ಪನ್ನರಿತು ಕ್ಷಮೆ ಯಾಚಿಸಿದ.
ಧರ್ಮ
- ಕನಕಾಪುರ ನಾರಾಯಣ
ಒಮ್ಮೆ ಋಷಿಯೊಬ್ಬನು ತಪಸ್ಸಿಗೆ ಕುಳಿತಿರಲು ಪಕ್ಷಿಯೊಂದು ಅವನ ತಲೆಯ ಮೇಲೆ ಗಲೀಜು ಮಾಡಿತು, ಋಷಿ ಕೋಪದಿಂದ ಆ ಪಕ್ಷಿಗೆ ಶಪಿಸಿ ಕೇವಲ ನೋಟದಿಂದಲೇ ಅದನ್ನು ಭಸ್ಮ ಮಾಡಿದನು.
ಆದಿನ ದೂರ ಪ್ರಯಾಣ ಹೊರಟಿದ್ದ ಋಷಿಯು ಸ್ವಲ್ಪ ಆಹಾರ ಭಿಕ್ಷೆಗಾಗಿ ಅಲ್ಲೇ ಒಂದು ಮನೆಯ ಮುಂದೆ ಬಂದು ನಿಂತು "ಭವತಿ ಭಿಕ್ಷಾಂದೇಹಿ"ಎಂದು ಕೂಗಿದ. ಆ ಮನೆಯಾಕೆ ಬಹಳ ತಡಮಾಡಿ ಹೊರಗೆ ಬಂದಳು, ಋಷಿಗೆ ತಾಳ್ಮೆ ಕಳೆದಿತ್ತು, ಕಮಂಡಲದಿಂದ ನೀರು ತೆಗೆದು ಶಪಿಸಿಬಿಡುವ ಆತುರವಾಗಿತ್ತು. ಆ ಮನೆಯಾಕೆ ಕುಪಿತ ಋಷಿಯನ್ನು ಕುರಿತು ಹೀಗೆಂದಳು "ಋಷಿವರ್ಯಾ ಸ್ವಲ್ಪ ತಾಳು ನೀನು ನನ್ನನು ಪಕ್ಷಿಯಂತೆ ಸುಡಬೇಡ, ಈ ಮನೆಯ ಗೃಹಿಣಿಯಾದ ನಾನು ಮೊದಲು ನನ್ನ ಮನೆವರ ಕೆಲಸ ಮಾಡುವುದು ನನ್ನ ಧರ್ಮ" ಎಂದಳು, ಋಷಿಗೆ ತನ್ನ ತಪ್ಪಿನರಿವಾಯಿತು.ಧರ್ಮವನ್ನು ತಾನೂ ಪಾಲಿಸಬೇಕೆಂದು ಆಕೆಯನ್ನು "ನಾನೂ ಧರ್ಮದ ಪಾಠವನ್ನು ಕಲಿಯಬೇಕಿದೆ"ಎಂದ. ಅದಕ್ಕವಳು ಧರ್ಮವ್ಯಾದನನ್ನು ಕಾಣಲು ಸೂಚಿಸಿದಳು. ಧರ್ಮವ್ಯಾದ ಮಾಂಸದ ವ್ಯಾಪಾರಿ, ಋಷಿ ಆತನ ಬಳಿ ಹೋಗಲು ಆತ ತನ್ನೆಲ್ಲಾ ಗಿರಾಕಿ ಹೋಗುವವರೆಗೂ ಕಾಯಿಸಿದ, ನಂತರ ತನ್ನ ತಂದೆ ತಾಯಿಯರನ್ನು ವಿಚಾರಿಸಿ ನಂತರ ಋಷಿಯನ್ನು ಬಂದ ವಿಚಾರವಾಗಿ ಕೇಳಿದ, ಅಷ್ಟರಲ್ಲಿ ಋಷಿಗೆ ಸಾಕಷ್ಟು ಅರಿವುಮೂಡಿತ್ತು. ಆ ಕೂಡಲೇ ಅಲ್ಲಿಂದ ಹೊರಟು ಅಗಲಿದ್ದ ತನ್ನ ತಾಯಿತಂದೆಯರನ್ನು ಕಂಡು ಕ್ಷಮೆ ಯಾಚಿಸಿ,ಆಶೀರ್ವಾದ ಪಡೆದು ಧರ್ಮ ಪಾಲಿಸಿದ.
ಮೃಗರಾಜ (ಹಾಸ್ಯ)
- ಕನಕಾಪುರ ನಾರಾಯಣ
ಕಾಡಿನ ರಾಜನಾದ ಸಿಂಹವು ಆಗಿಂದಾಗ್ಗೆ ಸಭೆ ಸೇರಿ ಎಲ್ಲ ಪ್ರಾಣಿಗಳನ್ನು ತನ್ನ ಹತೋಟಿಯಲ್ಲಿಟ್ಟುಕೊಂಡು ಹೆದರಿಸುತ್ತಾ ಕಾಲಕಳೆದಿತ್ತು.ಒಮ್ಮೆ ಆನೆಯ ಮಾತು ಕೇಳಿ ಕೆಲವು ಪ್ರಾಣಿಗಳು ಬೇರೆ ಪ್ರಾಂತ್ಯಕ್ಕೆ ಕಾಲಿಟ್ಟವು.ಇದನ್ನು ಕೇಳಿದ ಸಿಂಹವು ಕೋಪಗೊಂಡು ಮತ್ತೆ ಸಭೆ ಸೇರಿಸಿ ಒಂದೊಂದು ಪ್ರಾಣಿಯಮೇಲೂ ಎರಗಿ "ಯಾರು ಈ ಕಾಡಿಗೆ ರಾಜ?"ಎಂದು
ಘರ್ಜಿಸಿತು,ಚೂಪಾದ ಉಗುರು,ಕೆರಳಿದ ಕೇಸರನನ್ನು ಕಂಡು ಬೆದರಿ ಎಲ್ಲವೂ"ನೀನೇ,ನೀನೇ"ಎಂದವು, ಸಿಂಹವು ಆನೆಯ ಮೇಲೂ ಎರಗಿತು,ಜೋರಾಗಿ ಘರ್ಜಿಸಿ "ಯಾರು ಈ ಕಾಡಿಗೆ ರಾಜ?"ಎಂದಿತು, ಆನೆ ಒಮ್ಮೆಲೇ ತನ್ನ ಸೊಂಡಿಲಿನಿಂದ ಸಿಂಹವನ್ನು ತನ್ನ ಹಣೆಯ ಮೇಲಿಂದ ಕಿತ್ತು ದೂರಕ್ಕೆ ಎಸೆಯಿತು,ಕಾಲು ಮುರಿದು ತಲೆ ತಿರುಗುತ್ತಿದ್ದರೂ ಸಿಂಹ "ನಿನಗೆ ಉತ್ತರ ಗೊತ್ತಿಲ್ಲದಿದ್ದರೆ ಕೋಪ ಮಾಡಿಕೊಳ್ಳಬೇಡ ಗಜರಾಜ"ಎಂದು ಗೊಣಗುತ್ತಾ ಗುಹೆ ಸೇರಿತು.
ಸಣ್ಣ ಕಥೆ - ಕನಕಾಪುರ ನಾರಾಯಣ
ಯುವಕನೊಬ್ಬನಿಗೆ ಬಹಳ ಮುಂಗೋಪದ ಸ್ವಭಾವ. ಇದರಿಂದಾಗಿ ಅವನಿಗೂ ಅವನ
ಕುಟುಂಬದವರಿಗೂ ಆಗಿಂದಾಗ್ಗೆ ಕೆಟ್ಟ ಆಪಾದನೆಗಳು ಕೇಳಿ ಬರುತ್ತಿದ್ದವು. ಅದನ್ನರಿತ ಯುವಕ ತನ್ನ ಕೋಪವನ್ನು ತಡೆಯಲಾಗದೆ ಸಂಕಟಕ್ಕೊಳಗಾಗುತ್ತಲೇ ಇದ್ದ.ಒಮ್ಮೆ ಅವನ ತಂದೆ ಮಗನ್ನನ್ನು ಕರೆದು "ಮಗು ನೀನು ನಿಜವಾಗಿಯೂ ನಿನ್ನ ಕೋಪವನ್ನು ಹತೋಟಿಯಲ್ಲಿ ಇಡಬೇಕಿದ್ದಲ್ಲಿ ನಿನಗೆ ಕೋಪಬಂದಾಗಲೆಲ್ಲ ತೋಟದಲ್ಲಿನ ಬೇಲಿಯ ಮರದ ಮೇಲೆ ಒಂದು ಮೊಳೆಯನ್ನು ಹೊಡಿ"ಎಂದ. ಯುವಕ ಮೊದಲ ದಿನವೇ 37 ಮೊಳೆ ಹೊಡೆದ,ನಂತರ 21,13,8,3,2,1 ಹೀಗೇ ಬರುಬರುತ್ತಾ ಕೋಪ ಬರುವುದು ತಾನಾಗೇ ಕಡಿಮೆಯಾಯಿತು. ಅಪ್ಪನಿಗೆ ವಿಷಯ ತಿಳಿಸಿದ.ತಂದೆ "ಬಹಳ ಸಂತೋಷ ಮಗೂ ಇನ್ನು ಮುಂದೆ ನೀನು ಕೋಪಬರುವುದನ್ನು ತಡೆಯಬೇಕು,ಹಾಗೆ ಮಾಡಿದಾಗಲೆಲ್ಲಾ ಅಲ್ಲಿಂದ ಒಂದೊಂದು ಮೊಳೆಯನ್ನು ತೆಗೆಯುತ್ತಾ ಬಾ" ಅಂದ.
ಹಾಗೇ ದಿನಗಳು,ವಾರಗಳು ತಿಂಗಳುಗಳೇ ಕಳೆದವು.ತನ್ನ ಕೋಪವನ್ನು ತಡೆಯಲು ಶಕ್ತನಾದಾಗಲೆಲ್ಲಾ ಒಂದೊಂದಾಗಿ ಮೊಳೆಗಳನ್ನು ತೆಗೆದ"ಎಲ್ಲಾ ಕಳಚಿದ ನಂತರ ಸಂತಸದಿಂದ ಮತ್ತೆ ತನ್ನ ತಂದೆಗೆ ತಿಳಿಸಿದ. ತಂದೆ "ನನಗೆ ಬಹಳ ಖುಷಿಯಾಗುತ್ತಿದೆ ಮಗೂ,ನಿನ್ನ ಗುರಿಯನ್ನು ನೀನು ಮುಟ್ಟಿದೆ ಆದರೆ ನೋಡು ಮೊಳೆಯಿಂದ ಆ ಮರಕ್ಕೆ ತಾಗಿದ ಏಟುಗಳು ಮಾತ್ರ ಹೋಗಲಿಲ್ಲ. ಕೋಪದಿಂದಾಗುವ ಅನಾಹುತವೂ ಹಾಗೇ ಶಾಶ್ವತವಾಗಿ ಉಳಿದು ಬಿಡುತ್ತದೆ". ತಂದೆಯ ಮಾತಿನ ಅರ್ಥ ಮಗನಿಗರಿವಾಯಿತು.
Hosa Swaroopada Patrike tumbaa channaagide. Nanna Eradu Mooru Kiru Lekhanagalu Irabeku nodi. Ellarigoo Shubha Haaraikegalu. Nimma Kannaadaabhimaana Mugilu muttali mattu itara anivaasi kannadigarige maadariyaagali
ReplyDeleteTumba chennagi moodi baruttide horanada chilume
ReplyDeleteVery interesting short stories Mr Kanakapura Narayana keep writing
ReplyDelete